ಭಾಷಾ ಮಾಧ್ಯಮ ವಿಷಯದಲ್ಲಿ ಕನ್ನಡಕ್ಕೆ ಅನ್ಯಾಯವಾಗಿದೆ. ಕನ್ನಡ ನಮ್ಮ ಪರಿಸರ ಭಾಷೆ. ಭಾಷಾ ಮಾಧ್ಯಮ ಕನ್ನಡದಲ್ಲೇ ಇರಬೇಕೆಂಬುದು ನಮ್ಮ ಇಚ್ಛೆ. ಪ್ರಧಾನಿ ಭೇಟಿ ಮಾಡಿ ಸಂವಿಧಾನಕ್ಕೆ ತಿದ್ದುಪಡಿ ಬಗ್ಗೆ ಮನವರಿಕೆ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡುತ್ತಾ ಹೇಳಿದರು.