ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾನೂನು ಸಚಿವ ಮಾಧುಸ್ವಾಮಿ

ಗುರುವಾರ, 21 ಮೇ 2020 (10:18 IST)
ಕೋಲಾರ : ಕೆರೆ ಒತ್ತುವರಿ ತೆರವು ಬಗ್ಗೆ ಮನವಿ ಸಲ್ಲಿಸಲು ಬಂದಿದ್ದ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆಯ ಮೇಲೆ ಕಾನೂನು ಸಚಿವ ಮಾಧುಸ್ವಾಮಿ ಅವಾಚ್ಯ ಶಬ್ದಗಳಿಂದ  ನಿಂದಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.


ಕೆಸಿ ವ್ಯಾಲಿ ಯೋಜನೆಯಿಂದ ತುಂಬಿದ ಕೆರೆಗಳನ್ನು ವೀಕ್ಷಣೆ ಮಾಡುವ ಸಲುವಾಗಿ ಕಾನೂನು ಸಚಿವ ಮಾಧುಸ್ವಾಮಿ ಕೋಲಾರಕ್ಕೆ ಆಗಮಿಸಿದ್ದರು. ಆ ವೇಳೆ ಕೆರೆ ಒತ್ತುವರಿ ತೆರವು ಬಗ್ಗೆ ಮನವಿ ಸಲ್ಲಿಸಲು ರೈತ ಸಂಘದ ಸದಸ್ಯರು ಆಗಮಿಸಿದ್ದರು.
ಆಗ ಸಚಿವರಿಗೆ ಮನವಿ ಸಲ್ಲಿಸಿದ ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿ ಗೌಡ ಮೇಲೆ ಕಾನೂನು ಸಚಿವ ಮಾಧುಸ್ವಾಮಿ ಸಿಡಿಮಿಡಿಗೊಂಡಿದ್ದಾರೆ. ಮಹಿಳೆಗೆ ರ್ಯಾಸ್ಕಲ್ ಎಂದ ಕಾನೂನು ಸಚಿವ ಬಾಯಿ ಮುಚ್ಚಿಕೊಂಡು ಸುಮ್ನೆ ಹೋಗು ಎಂದು ಅವಾಜ್ ಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ