ಕಡಲ ಕೊರೆತ ಪ್ರದೇಶದಲ್ಲಿ ಶಾಸಕಿ

ಭಾನುವಾರ, 12 ಜುಲೈ 2020 (18:15 IST)
ದೇವಬಾಗದ ವ್ಯಾಪ್ತಿಯಲ್ಲಿ ಕಡಲ ಕೊರೆತ ಸಂಭವಿಸಿದೆ.

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಿತ್ತಾಕುಲ ಪಂಚಾಯತಿ ವ್ಯಾಪ್ತಿಯ ದೇವಬಾಗದ ಕಡಲ ಕೊರೆತ ಪ್ರದೇಶಕ್ಕೆ ಶಾಸಕಿ ರೂಪಾಲಿ ನಾಯ್ಕ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 ಈ ಸಂದರ್ಭದಲ್ಲಿ ಸ್ಥಳಿಯರೊಂದಿಗೆ ಮಾತನಾಡಿದ ಶಾಸಕಿ, ಕಾರವಾರ-ಅಂಕೋಲಾ ವ್ಯಾಪ್ತಿಯಲ್ಲಿ ಕಡಲ ಕೊರೆತ ತಡೆಗೆ 17 ಕೋಟಿ ರೂ. ಮಂಜೂರಾಗಿದೆ. ಪ್ರಕ್ರಿಯೆ ಟೆಂಡರ್ ಹಂತದಲ್ಲಿದೆ. ಮಳೆಗಾಲದ ನಂತರ ಕಾಮಗಾರಿ ಆರಂಭಗೊಳ್ಳಲಿದೆ.

ಅಲ್ಲಿಯವರೆಗೆ ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಒಳನಾಡು ಜಲಸಾರಿಗೆ ಮತ್ತು ಬಂದರು ಇಲಾಖೆ ಅಧಿಕಾರಿಗಳು ಇದ್ದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ