ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್ : ಜ್ಯೂ. ಖರ್ಗೆ ಕಿಡಿ

ಭಾನುವಾರ, 2 ಆಗಸ್ಟ್ 2020 (16:37 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಲೀಗಲ್ ನೋಟಿಸ್ ನೀಡಿದ್ದಕ್ಕೆ ಖರ್ಗೆ ಸಿಡಿಮಿಡಿಗೊಂಡಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಲೀಗಲ್ ನೋಟಿಸ್ ಕೊಡೊದಕ್ಕೆ ಎನ್.ರವಿಕುಮಾರ್ ಯಾರು ಅಂತ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ತಂದಿರುವ ಉಪಕರಣಗಳ ಖರೀದಿಯಲ್ಲಿ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪವನ್ನು ದಾಖಲೆ ಸಹಿತ ಮಾಡಲಾಗಿದೆ.

ಇದಕ್ಕೆ ಸರಕಾರ ಉತ್ತರ ಕೊಡಬೇಕೆ ಹೊರತು ರವಿಕುಮಾರ್ ಅಲ್ಲ ಅಂತ ಜರಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ