ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಲಿ ಎಂದ ಜಾರಕಿಹೊಳಿ : ರಾಜಕೀಯ ಮೆಗಾ ಪ್ಲ್ಯಾನ್

ಶುಕ್ರವಾರ, 31 ಜನವರಿ 2020 (19:19 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡೋದು ಇನ್ನೊಂದಿಷ್ಟು ದಿನ ಮುಂದಕ್ಕೆ ಹೋಗಲಿ. ಹೀಗಂತ ಹೊಸ ಬಾಂಬ್ ಸಿಡಿಸಿದ್ದಾರೆ ಶಾಸಕ ರಮೇಶ್ ಜಾರಕಿಹೊಳಿ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಬಗ್ಗೆ ಹಾಗೂ ಸಿಎಂ ಯಡಿಯೂರಪ್ಪರ ಮೇಲೆ ತಮಗೆ ಅಪಾರ ನಂಬಿಕೆ ಇದೆ ಅಂತ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಅರ್ಜೆಂಟ್ ಆಗಿ ಆಗಬೇಕಿಲ್ಲ. ಇನ್ನೊಂದೆರಡು ವಾರ ಮುಂದಕ್ಕೆ ಹೋದ್ರೂ ಯಾವ ಚಿಂತೆ ಇಲ್ಲಾ ಅಂತ ಹೇಳಿದ್ದಾರೆ.

ಇದೇ ವೇಳೆ, ಬೈ ಎಲೆಕ್ಷನ್ ನಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡೋ ವಿಷಯ ಬಿಜೆಪಿ ಹೈಕಮಾಂಡ್ ಗೆ ಬಿಟ್ಟ ವಿಷಯ ಅಂತ ರಮೇಶ್ ಜಾರಕಿಹೊಳಿ ಹೇಳಿದ್ದು ಹೊಸ ಚರ್ಚೆಗೆ ಕಾರಣವಾಗ್ತಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ