ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್​ ನೀಡದಂತೆ ಪತ್ರ

ಶುಕ್ರವಾರ, 7 ಏಪ್ರಿಲ್ 2023 (19:46 IST)
ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಇನ್ನೂ ನಿಂತಿಲ್ಲ. ಪಕ್ಷದ ಕಾರ್ಯಕರ್ತರು, ಶಾಸಕರ ವಿರುದ್ಧ ಬಂಡಾಯ ಎದ್ದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ, ಮೂಡಿಗೆರೆಯಲ್ಲಿ ಡಬಲ್​ ಇಂಜಿನ್​ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ವಿಜಯ ಸಂಕಲ್ಪ ಯಾತ್ರೆ ಮಾಡಿತ್ತು. ಈ ಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಾರ್ಯಕರ್ತರು ಅಸಮಾಧಾನಗೊಂಡು ಎಂ.ಪಿ.ಕುಮಾರಸ್ವಾಮಿಯವರಿಗೆ ಯಾವುದೇ ಕಾರಣಕ್ಕೂ ಟಿಕೆಟ್​ ನೀಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್​ ನೀಡದಂತೆ ಕಾರ್ಯಕರ್ತರು ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದಾರೆ. ಮೂಡಿಗೆರೆ ತಾಲೂಕಿನ ಪ್ರತಿ ಹೋಬಳಿಯ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್​​ ಸಂತೋಷ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ 10 ಅಂಶಗನ್ನೊಳಗೊಂಡ ಪತ್ರವನ್ನು ಬರೆದು ಇ-ಮೇಲ್ ಮಾಡಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ