ಗೋವಾ ಸಿಎಂ ಪತ್ರವನ್ನು ನ್ಯಾಯಾಧೀಕರಣಕ್ಕೆ ನೀಡಲಿ– ಶೆಟ್ಟರ್

ಶನಿವಾರ, 30 ಡಿಸೆಂಬರ್ 2017 (14:29 IST)
ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಮಹಾ ನಾಟಕವಾಡುತ್ತಿದೆ ಎಂದು ಆರೋಪಿಸಿರುವ ವಿರೋಧಪಕ್ಷದ ನಾಯಕ ಜಗದೀಶ ಶೆಟ್ಟರ್ ಅವರು ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ನೀಡಿರುವ ಪತ್ರವನ್ನು ನ್ಯಾಯಾಧೀಕರಣಕ್ಕೆ ಸಲ್ಲಿಸಲಿ ಎಂದು ಹೇಳಿದ್ದಾರೆ.
 
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಮಹಾದಾಯಿ ವಿವಾದದಲ್ಲಿ ಗೋವಾ ಮುಖ್ಯಮಂತ್ರಿಯನ್ನು ಮನವೊಲಿಸಲು ನಮಗೆ ಹೇಳಲಾಗಿತ್ತು. ಆದ್ದರಿಂದ ಮನೋಹರ ಪರಿಕ್ಕರ್ ಅವರನ್ನು ಮನವೊಲಿಸಿ ಪತ್ರವನ್ನೂ ತಂದಿದ್ದೇವೆ. ಆದರೆ, ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.
 
ಮಹಾದಾಯಿ ವಿವಾದ ಬಗೆಹರಿಸಲು ಗೋವಾ ಕಾಂಗ್ರೆಸ್ ನಾಯಕರನ್ನು ಮನವೊಲಿಸಬೇಕಾದ ರಾಜ್ಯ ಕಾಂಗ್ರೆಸ್‌ನವರು ಮಹಾದಾಯಿ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ