ಖಾಸಗಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗಾವಕಾಶ ಕೊಡದಿದ್ದರೆ ಲೈಸೆನ್ಸ್ ರದ್ದು : ಪರಮೇಶ್ವರ್ ಎಚ್ಚರಿಕೆ

ಮಂಗಳವಾರ, 23 ಮೇ 2023 (10:24 IST)
ತುಮಕೂರು : ಜಿಲ್ಲೆಯಲ್ಲಿರುವ ಖಾಸಗಿ ಕಂಪನಿಗಳು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕೊಡದಿದ್ದರೇ ಅವರ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ನೂತನ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ತುಮಕೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ಥಳೀಯ ಯುವಕರಿಗೆ ಉದ್ಯೋಗ ಅವಕಾಶ ನೀಡುತ್ತಿಲ್ಲ ಎಂಬ ಸಾಕಷ್ಟು ದೂರುಗಳು ಬಂದಿದೆ. ಈ ಕುರಿತಂತೆ ಚಿಂತನೆ ನಡೆಸಿ ಅಂತಹ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಸ್ಥಳೀಯ ಯುವಕರು ಉದ್ಯೋಗ ದೊರೆಯುತ್ತಿಲ್ಲ ಎಂದು ಆತಂಕಪಡಬೇಕಿಲ್ಲ. ಕಾಂಗ್ರೆಸ್ ಸರ್ಕಾರ ನಿರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಿದೆ ಎಂಧು ಅಭಯ ನೀಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ