ಲಿಂಗಾಯತ ಪ್ರತ್ಯೇಕ ಧರ್ಮ– ಸಿದ್ದರಾಮಯ್ಯ ನಿರ್ಧಾರಕ್ಕೆ ಪರಮೇಶ್ವರ ಅಸಮಾಧಾನ

ಶನಿವಾರ, 23 ಡಿಸೆಂಬರ್ 2017 (16:21 IST)
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸಲು ಸಮಿತಿ ರಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅಸಮಧಾನಗೊಂಡಿದ್ದಾರೆ.
 
ಲಿಂಗಾಯತ ಅಲ್ಪಸಂಖ್ಯಾತ ಪಟ್ಟಿಗೆ ಸೇರ್ಪಡೆ ವಿಚಾರ ಸಂಬಂಧ ಸಿದ್ದರಾಮಯ್ಯ ಸಮಿತಿ ಮಾಡಿದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ಮುಖಂಡರಿಂದಲೂ ಆಕ್ಷೇಪ ವ್ಯಕ್ತವಾಗಿದ್ದು, ಈ ವಿವಾದದಲ್ಲಿ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
 
ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ, ಸಚಿವ ಈಶ್ವರ ಖಂಡ್ರೆ ಅವರು ವಿರೋಧಿಸಿದ್ದು, ಕೆಪಿಸಿಸಿ ಈ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳಲು ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ