ರಾಜ್ಯದಲ್ಲಿ ಲಾಕ್ಟನ್ ಮಾಡುವುದಿಲ್ಲ - ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ಶುಕ್ರವಾರ, 14 ಜನವರಿ 2022 (20:20 IST)
ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.
ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಮಾಡೋಣ ಕಂಡಿತ ಮಾಡುವುದಿಲ್ಲ.
ಈಗಾಗಲೇ ಎರಡು ಬಾರಿ ಲಾಕ್ಡೌನ್ ನಿಂದ ಸಾಕಷ್ಟು ಆರ್ಥಿಕ ಸಮಸ್ಯೆ ಜನರಿಗೆ ಉಂಟಾಗಿರುವ ಅರಿವು ಸರಕಾರಕ್ಕೆ ಇದೆ.
ಹೀಗಾಗಿ ಲಾಕ್ಡೌನ್ ಉದ್ದೇಶ ಸರಕಾರದ ಮುಂದಿಲ್ಲ.
ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕು- ಸಚಿವರ ಮನವಿ.
ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ  ಕೋವಿಡ್  ಸಂಖ್ಯೆಗಳ ನಿರೀಕ್ಷೆ.
ಮೂರು ಮತ್ತು ನಾಲ್ಕನೇ ವಾರದಲ್ಲಿ ಇದು ಕಡಿಮೆಯಾಗುತ್ತಾ ಹೋಗುತ್ತದೆ.
ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹೀಗಾಗಿ ಸರಕಾರ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ.
ಆತಂಕಕಾರಿ ಮತ್ತು ಜನರಿಗೆ ಸಮಸ್ಯೆ ಉಂಟು ಮಾಡುವ ನಿಯಮ ಜಾರಿ ಮಾಡುವುದಿಲ್ಲ.
ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ