ಸಿ.ಟಿ.ರವಿ ಹಾಗೂ ಸುದರ್ಶನ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು, ಆಗಿನ ಚಿಕ್ಕಮಗಳೂರು ನಗರಾಭಿವೃದ್ಧಿ ಆಯುಕ್ತ ನಾಗಭೂಷಣ್ ಅವರ ಮೂಲಕ ಅಕ್ರಮವಾಗಿ ಭೂ ಪರಿವರ್ತನೆ ಮಾಡಿ, ನಿವೇಶನಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಈ ಮೂವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಈ ಮೂವರು ಸರ್ಕಾರ ಮತ್ತು ಕಂದಾಯ ಇಲಾಖೆ ಗಮನಕ್ಕೆ ತಾರದೆ ಸುಮಾರು 14 ಕೋಟಿ ರೂ. ನಷ್ಟ ಉಂಟು ಮಾಡಿದ್ದಾರೆಂದು ಐಪಿಸಿ ಸೆಕ್ಷನ್ 406, 409, 420, 426, 469, 468, 471, 474 ಮತ್ತು 120 (ಬಿ) ಅಡಿ ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಇನ್ಸ್ಪೆಕ್ಟರ್ ಸಂಪತ್ ನ್ಯಾಯಾಲಯಕ್ಕೆ ಎಫ್ಐಆರ್ ಸಲ್ಲಿಸಿದ್ದಾರೆ.