ಈ ಸಂಬಂಧ ವಿಧಾನಸಭೆಯಲ್ಲಿ ಸೋಮವಾರ ಚರ್ಚೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇನ್ನು ಈ ಪ್ರಕರಣ ಸಂಬಂಧ ಈ ಹಿಂದೆ ಪ್ರತಿಕ್ರಿಯಿಸಿದ್ದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ನನ್ನ ಮೇಲೆ ಆರೋಪ ಕೇಳಿ ಬರುತ್ತಿರಬಹುದು. ಆದರೆ ಆರೋಪ ಸಾಬೀತಾಗದೆ, ತನಿಖಾ ವರದಿ ಸಲ್ಲಿಕೆಯಾಗದೆ ನಾನು ಪದವಿಗೆ ರಾಜೀನಾಮೆ ನೀಡುವುದಿಲ್ಲ ಎಂದಿದ್ದರು. ಅಲ್ಲದೆ ಸರ್ಕಾರವೂ ಕೂಡ ಲೋಕಾಯುಕ್ತರನ್ನು ಪದಚ್ಯುತಿಗೊಳಿಸಲು ಸರ್ಕಾರ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಪದಚ್ಯುತಿಗೆ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಈ ಹಾದಿ ತುಳಿದಿವೆ.