ಶಿವಮೊಗ್ಗದಲ್ಲಿ ಲೋಕಾಯುಕ್ತ ‘ಶಿಕಾರಿ’

ಸೋಮವಾರ, 24 ಏಪ್ರಿಲ್ 2023 (14:38 IST)
ರಾಜ್ಯಾದ್ಯಂತ ಲೋಕಾಯುಕ್ತ ದಾಳಿ ಮುಂದುವರೆದಿದ್ದು, ಶಿವಮೊಗ್ಗದ ರಿಟೈರ್ಡ್ DFO ನಾಗರಾಜ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅರಣ್ಯ ಇಲಾಖೆಯ ನಿವೃತ್ತ ವನ್ಯಜೀವಿ ವಿಭಾಗದ ಉಪಸಂರಕ್ಷಣಾಧಿಕಾರಿ ನಾಗರಾಜ್​ಗೆ ಅಧಿಕಾರಿಗಳು ಶಾಕ್​ ನೀಡಿದ್ದು, ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ನಾಗರಾಜ್ ನಿವಾಸದ ಮೇಲೆ ಹಾಗೂ ತೋಟದಮನೆ ಮೇಲೂ ದಾಳಿ ಮಾಡಿದ್ದಾರೆ.. ಅಕ್ರಮ ಹಣ ಹಾಗೂ ಆಸ್ತಿ ಹೊಂದಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.. ಶಿಕಾರಿಪುರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ