ಬೀದರ್ ಜಿಲ್ಲೆಯ ಎಸ್ಪಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅಶೋಕ್ ಪಾಟೀಲ್ ಅವರ ನಿವಾಸದ ಮೇಲೂ ದಾಳಿ ನಡೆಸಿರುವ ಪೊಲೀಸರು, ಅವರ ನಗರದ ಎಲ್ಐಸಿ ಕಾಲೋನಿಯಲ್ಲಿನ ನಿವಾಸ, ಆಂಧ್ರದ ಮೆಹಬೂಬ್ ನಗರ ಜಿಲ್ಲೆಯ ಚಿಣಗಿಪಲ್ಲಿಯಲ್ಲಿನ ತೋಟದ ಮನೆ, ಬಸವ ಕಲ್ಯಾಣ ತಾಲೂಕಿನ ಕಂಡಾಳ ಗ್ರಾಮದಲ್ಲಿನ ನಿವಾಸ ಹಾಗೂ ಬಾಲ್ಕಿಯ ಸಿದ್ದೇಶ್ವರನಗರದ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ ಭದ್ರವತಿ ತಾಲೂಕಿನ ಸರ್ಕಾರಿ ಎಂಪಿಎಂ ಕಾರ್ಖಾನೆಯಲ್ಲಿ ಸಹಾಯಕ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಜಿ.ವಿ.ನಂಜಯ್ಯ ಅವರ ನಿವಾಸದ ಮೇಲೆ ಇನ್ಸ್ಪೆಕ್ಟರ್ ರುದ್ರೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ಪ್ರಗತಿಯಲ್ಲಿದೆ.