ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತರಾಗಿದ್ದ ಡಿ.ಕೆ. ರವಿ ಸಾವಿಗೀಡಾವುದಕ್ಕೆ 2 ದಿನ ಮೊದಲು ರಾಜ್ಯದಲ್ಲಿ ನಡೆಯುತ್ತಿರುವ ಕೋಟ್ಯಂತರ ರೂ. ಲಾಟರಿ ಮಾಫಿಯಾದ ಬಗ್ಗೆ ದೂರು ಸಹ ದಾಖಲಾಗಿತ್ತು ಎನ್ನಲಾಗಿದೆ. ಕರ್ನಾಟಕ ರಾಜ್ಯ ಲಾಟರಿ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷ ಸಿ ರಾಮಕೃಷ್ಣ ಈ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.