ಕಾಂಗ್ರೆಸ್ ಸರಕಾರ ಯಾವತ್ತೂ ಬಡವರ, ಹಿಂದುಳಿದವರ ಪರವಾಗಿದೆ ಎಂದು ಹೇಳಿಕೆ ನೀಡುತ್ತದೆ. ಆದರೆ, ಸರಕಾರದಿಂದ ಹಿಂದುಳಿದ ವರ್ಗಗಳಿಗೆ ಯಾವುದೇ ರೀತಿಯ ಲಾಭವಾಗಿಲ್ಲ ಸರಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಭೂ ಒತ್ತುವರಿ ತೆರವಿನಲ್ಲಿ ಬಡವರ ಮನೆಗಳನ್ನು ನೆಲಸಮಗೊಳಿಸಲಾಗುತ್ತಿದೆ. ಆದರೆ, ಶ್ರೀಮಂತರ ಮತ್ತು ಪ್ರಭಾವಿಗಳ ಮನೆಗಳನ್ನು ನೆಲಸಮಗೊಳಿಸಲು ಬಿಬಿಎಂಪಿ ಹಿಂದೇಟು ಹಾಕುತ್ತಿದೆ. ಸಿಎಂ ಸಿದ್ದರಾಮಯ್ಯ ಸರಕಾರ ಬಡವರಿಗೊಂದು ನ್ಯಾಯ, ಶ್ರೀಮಂತರಿಗೊಂದು ನ್ಯಾಯ ಎನ್ನುವಂತೆ ವರ್ತಿಸುತ್ತಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಎಂ.ಸಿ.ನಾಣಯ್ಯ ವಾಗ್ದಾಳಿ ನಡೆಸಿದ್ದಾರೆ.