ಯಡಿಯೂರಪ್ಪ ಕಚಡಾ ಮುಖ್ಯಮಂತ್ರಿ: ಮಧು ಬಂಗಾರಪ್ಪ ಕಿಡಿ

ಶುಕ್ರವಾರ, 21 ಜುಲೈ 2017 (18:11 IST)
ಶಿವಮೊಗ್ಗ ಜಿಲ್ಲೆಯಿಂದ ಯಡಿಯೂರಪ್ಪನಂತಹ ಕಚಡಾ ಮುಖ್ಯಮಂತ್ರಿಯನ್ನ ಕೊಟ್ಟಿದ್ದಕ್ಕೆ ನಾಚಿಕೆ ಆಗುತ್ತಿದೆ. ಶಿವಮೊಗ್ಗ ಜಿಲ್ಲೆಯಿಂದ ಬಂದ ಮೂವರು ಮುಖ್ಯಮಂತ್ರಿಗಳಲ್ಲೇ ಯಡಿಯೂರಪ್ಪ ಕಚಡಾ ಮುಖ್ಯಮಂತ್ರಿ ಎಂದು ಮಧು ಬಂಗಾರಪ್ಪ ಕಿಡಿ ಕಾರಿದ್ಧಾರೆ.

ಧಾರವಾಡದಲ್ಲಿ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಸಿಎಂ ಸಿದ್ದರಾಮಯ್ಯನವರ ಮೂಗು ಹಿಡಿದುಕೊಂಡು ರೈತರ ಸಾಲ ಮನ್ನಾ ಮಾಡಿಸುತ್ತೇನೆ ಎಂದು ಹೇಳುತ್ತಿದ್ದ ಯಡಿಯೂರಪ್ಪ, ಪ್ರಧಾನಮಂತ್ರಿ ನರೇಂದ್ರ ಮೋದಿ ಮೂಗಿ ಹಿಡಿದು ಸಾಲಮನ್ನಾ ಮಾಡಿಸಲಿ ಎಂದು ಕಿಡಿ ಕಾರಿದ್ಧಾರೆ. 17 ಸಂಸದರು ಏನು ಮಾಡುತ್ತಿದ್ದಾರೆ. ರೈತರ ನೆರವಿಗೆ ಬರುವುದನ್ನ ಬಿಟ್ಟು ಏನ್ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಕ್ಕೆ ಬಂದರೆ ಸಾಲಮನ್ನಾ ಮಾಡುವುದಾಗಿ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳುತ್ತಿರುವ ಯಡಿಯೂರಪ್ಪನವರ ರಕ್ತ ಒಳ್ಳೆಯ ರಕ್ತವಲ್ಲ, ಅದು ರೈತ ವಿರೋಧಿ ರಕ್ತ. ಗೊಬ್ಬರ ಕೇಳಲು ಹೋದ ರೈತರು ಮಾಡಿದ್ದು ನೆನಪಿಲ್ವಾ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ