ರಾಜ್ಯದಲ್ಲಿ ಕೆಲವು ಮಹಾತ್ಮರ ಜಯಂತಿ ಮಾತ್ರ ಆಚರಿಸಲಿ: ಕುಮಾರಸ್ವಾಮಿ

ಶುಕ್ರವಾರ, 13 ನವೆಂಬರ್ 2015 (15:48 IST)
ರಾಜ್ಯದಲ್ಲಿ ಕೆಲವು ಮಹಾತ್ಮರ ಜಯಂತಿ ಮಾತ್ರ ಆಚರಣೆ ಮಾಡಬೇಕು, ಉಳಿದವರ ಜಯಂತಿಗಳನ್ನು ರದ್ದುಗೊಳಿಸಬೇಕು ಎಂದು ಜಿಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯಿಂದ ರಾಜ್ಯದಲ್ಲಿ ಎರಡು ಕೋಮುಗಳ ಬಗ್ಗೆ ಘರ್ಷಣೆ ಉಂಟಾಗಿದೆ. ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಿಸಿರುವುದೇ ಮೂಲ ಕಾರಣವಾಗಿದೆ ಎಂದು ಆರೋಪಿಸಿದರು.
 
ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಹೋರಾಟ ಮಾಡಲಿದೆ. ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಂಡು ಜನತೆಯ ಜೀವನವನ್ನು ಅಸ್ತವ್ಯಸ್ಥಗೊಳಿಸುವ ಪ್ರತಿಭಟನೆಗಳಲ್ಲಿ ತೊಡಗಿವೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ