ಮಹದಾಯಿ ವಿವಾದ: ಜುಲೈ 30 ರಂದು ಕರ್ನಾಟಕ ಬಂದ್‌ಗೆ ವಾಟಾಳ್ ಕರೆ

ಗುರುವಾರ, 28 ಜುಲೈ 2016 (17:48 IST)
ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕಕ್ಕೆ ಹಿನ್ನೆಡೆ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಜುಲೈ 30 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನೀರು ಹಂಚಿಕೆ ವಿವಾದದ ತೀರ್ಪಿನಿಂದ ರಾಜ್ಯದ ಜನತೆಗೆ ಅನ್ಯಾಯವಾಗಿದೆ. ಈ ಕುರಿತು ಮಹದಾಯಿ ಟ್ರಿಬ್ಯುನಲ್ ನೀಡಿರುವ ತೀರ್ಪು ವಿರೋಧಿಸಿ ಜುಲೈ 30 ರಂದು ಕರ್ನಾಟಕ ರಾಜ್ಯ ಬಂದ್‌ಗೆ ಕರೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
 
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಣ್ಣು ತೆರೆಸುವ ಉದ್ದೇಶದಿಂದ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.
 
ಜುಲೈ 30 ರಂದು ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಕರ್ನಾಟಕ ಬಂದ್ ಮಾಡಲು ಕರೆ ನೀಡಿದ್ದು, ಚಿತ್ರೋದ್ಯಮ ಸೇರಿದಂತೆ ಒಟ್ಟು 1 ಸಾವಿರ ಸಂಘಟನೆಗಳು ಬೆಂಬಲ ನೀಡಲಿವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ