ಗದಗ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ನ್ಯಾಯಾಧಿಕರಣದ ತೀರ್ಪು ಸರಿಯಾಗಿಲ್ಲ. ನ್ಯಾಯಮೂರ್ತಿಗಳಿಗೆ ಅಂತಃಕರಣ, ಮಾನವೀಯತೆ ಹಾಗೂ ಮನುಷ್ಯತ್ವ ಇರಬೇಕು ಎಂದು ಗುಡುಗಿದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಲಿ. ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದು ಒಮ್ಮತದ ತೀರ್ಮಾನಕ್ಕೆ ಬರಬೇಕು. ಈ ಮೂಲಕ ಮಹದಾಯಿ ವಿವಾದವನ್ನು ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದರು.