ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸಂಸದರು ಆಸಕ್ತಿ ವಹಿಸುತ್ತಿಲ್ಲ. ಅವರು ಕೂಡಲೇ ಪ್ರಧಾನಿ ಮೋದಿ ಅವರ ಮೇಲೆ ಒತ್ತಡ ಹಾಕಬೇಕಾಗಿದೆ. ಇಲ್ಲವಾದಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಡಲಿ ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯಕ್ಕೆ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರಾದ ಜೆ.ಎಂ.ಪಾಂಜಾಲ್ ಅಧ್ಯಕ್ಷತೆಯ ಪೀಠ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಾರಿ ಹಿನ್ನೆಡೆಯಾಗಿತ್ತು.