ಸತ್ಯ, ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಕೊಟ್ಟು ಇಡೀ ವಿಶ್ವಕ್ಕೆ ಮಾದರಿಯಾದವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರು. ಅವರು ನುಡಿದಂತೆ ನಡೆದು ಇತರರಿಗೂ ಪ್ರೇರಣೆಯಾದವರು. ಬ್ರಿಟಿಷರ ವಿರುದ್ದ ಹೋರಾಟ ನಡೆಸಲು ಅವರು ಕಂಡುಕೊಂಡಿದ್ದು ಅಹಿಂಸೆಯ ಮಾರ್ಗ. ಹೀಗಾಗಿಯೇ ವಿಶ್ವದೆಲ್ಲೆಡೆ ರಾಷ್ಟ್ರಪಿತನಿಗೆ ಅತ್ಯಂತ ಉನ್ನತ ಸ್ಥಾನಮಾನವಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಇಂದಿನ ಜನತೆ ನಡೆಯಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಮಹಾತ್ಮ ಗಾಂಧಿಯವರಂತೆ ಮಾಜಿ ಪ್ರಧಾನಿ ಲಾಲ್ಬಹುದ್ದೂರ್ ಶಾಸ್ತ್ರಿ ಕೂಡ ದೇಶ ಕಂಡ ಸರಳ, ಸಜ್ಜನಿಕೆ ಮತ್ತು ಸೂಕ್ಷ್ಮತೆಯ ಅಪರೂಪದ ರಾಜಕಾರಣಿ. ಪ್ರಾಮಾಣಿಕತೆಗೆ ಮತ್ತೊಂದು ಹೆಸರು ಅವರು ಎಂದು ಕೊಂಡಾಡಿದರು. ಆದರ್ಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡಿದ್ದ ಅವರು ರೈಲ್ವೆ ಸಚಿವರಾಗಿದ್ದ ವೇಳೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂತಹ ಸಜ್ಜನ ರಾಜಕಾರಣಿಯನ್ನು ಕಾಣುವುದೇ ಅಪರೂಪ ಎಂದರು.
ಸ್ವಾಭಿಮಾನದ ಕಿಚ್ಚ ಹಚ್ಚಿದ ಧೀಮಂತರು:
ಜೈ ಜವಾನ್, ಜೈ ಕಿಸಾನ್ ಘೋಷಣೆ ಮಾಡುವ ಮೂಲಕ ರೈತರು ಮತ್ತು ಸೈನಿಕರಲ್ಲಿ ಸ್ವಾಭಿಮಾನದ ಕಿಚ್ಚನ್ನು ಹಚ್ಚಿದ್ದರು. ಲಾಲ್ಬಹುದ್ದೂರ್ ಶಾಸ್ತ್ರಿ ಕೂಡ ಕರ್ನಾಟಕದ ಜತೆ ಅವಿನಾಭಾವ ಸಂಬಂಧ ಇಟ್ಟುಕೊಂಡಿದ್ದರು. ಆಲಮಟ್ಟಿ ಜಲಾಶಯ ಬಳಿ ಅಣೆಕಟ್ಟು ನಿರ್ಮಾಣ ಮಾಡಲು ಅವರೇ ಕಾರಣೀಭೂತರು ಎಂದು ತಿಳಿಸಿದರು