ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ನಿರ್ಮೂಲನೆಗೆ ಮುಂದಾದವರು ಮೊದಲು ತಮ್ಮ ಪಕ್ಷದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪತ್ನಿ ವಿರುದ್ಧ ಕೇಳಿ ಬಂದಿರುವ 40 ಸಾವಿರ ಕೋಟಿ ಗಣಿ ವ್ಯವಹಾರ ಹಾಗೂ ಸಂಸದ ಶ್ರೀರಾಮುಲು ಅವರು ನೂರು ಕೋಟಿ ರೂಪಾಯಿ ಖರ್ಚು ಮಾಡಿ ಮನೆ ಕಟ್ಟಿಸಿದ್ದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಸವಾಲ್ ಎಸೆದರು.