ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಗರಂ ಆಗಿದ್ದು, ಇಲ್ಲಿ ಮಲಪ್ರಭಾ ನದಿಯ ಉಗಮ ಸ್ಥಾನ ಮಾವುಲಿ ಅಮ್ಮನ ಭಾವಚಿತ್ರಕ್ಕೆ ರಕ್ತಾಭಿಷೇಕ ಮಾಡಿದರು. ಅಲ್ಲದೆ ರಕ್ತದ ಸಹಿ ಸಂಗ್ರಹಿಸಿ ತಹಶೀಲ್ದಾರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಂತಿಮ ಮನವಿ ಸಲ್ಲಿಸಿದರು. ಈ ಹಿಂದೆಯೂ ಕೂಡ ರಕ್ತದಲ್ಲಿ ಪತ್ರ ಬರೆದು ಪ್ರಧಾನಿಗಳಿಗೆ ಸಲ್ಲಿಸಲಾಗಿತ್ತು.