ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ ಬಳಿಕ ಒಂದೂವರೆ ತಿಂಗಳ ಗಂಡು ಮಗು ದುರ್ಮರಣ

ಶನಿವಾರ, 8 ಡಿಸೆಂಬರ್ 2018 (10:05 IST)
ಮಂಡ್ಯ : ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ ಬಳಿಕ ಒಂದೂವರೆ ತಿಂಗಳ ಗಂಡು ಮಗು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಜ್ಯೋತಿ ಮತ್ತು ಸ್ವಾಮಿ ದಂಪತಿಯ ಗಂಡು ಮಗುವಿಗೆ ಗುರುವಾರ ಕಾಡುಕೊತ್ತನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು ಕೊಡಿಸಲಾಗಿತ್ತು. ಚುಚ್ಚುಮದ್ದು ಕೊಡಿಸಿದ ನಂತರ ಅಸ್ವಸ್ಥಗೊಂಡಿದ್ದ ಮಗು ಶುಕ್ರವಾರ ಬೆಳಗ್ಗೆ ಮೃತಪಟ್ಟಿದೆ. ಭಾನುವಾರ ಮೃತ ಮಗುವಿನ ನಾಮಕರಣ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಇದೀಗ. ಮಗುವನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.


ಪೋಷಕರು ಮಗು ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ್ದರಿಂದ ಸಾವನಪ್ಪಿದೆ ಎಂದು ಅರೋಪಿಸಿ ಮಗು ಸಾವಿಗೆ ತನಿಖೆ ನಡೆಸುವಂತೆ ಪೋಷಕರು ಒತ್ತಾಯಿಸುತ್ತಿದ್ದಾರೆ. ಆದರೆ ಮಗು ಸಾವಿಗೂ ಚುಚ್ಚುಮದ್ದಿಗೂ ಸಂಬಂಧವಿಲ್ಲ ಅಂತ ಡಿಎಚ್‍ ಒ  ನಾಗರಾಜ್ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ