ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ
ಇದೀಗ ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾಮಸ್ಥರನ್ನು ಬಂಧಿಸಲಾಗಿದೆ. ಬಂಧಿತರನ್ನು ಮಾದುರಾಜ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ. ಮಾದುರಾಜ್ ಗೆ ಸೇರಿದ ಹಸುಗಳನ್ನು ಹುಲಿ ತಿಂದು ಹಾಕಿತ್ತು. ಇದನ್ನು ನಾಗರಾಜ್ ಬಳಿ ಆತ ಹೇಳಿಕೊಂಡಿದ್ದ.
ಹೀಗಾಗಿ ಇಬ್ಬರೂ ಕ್ರಿಮಿನಾಶಕ ಬಳಸಿ ಹುಲಿಗಳನ್ನು ಕೊಲ್ಲಲು ಸಂಚು ರೂಪಿಸಿದ್ದರು. ಅದರಂತೆ ನಾಗರಾಜ್ ಮೃತ ಹಸುವಿಗೆ ವಿಷ ಲೇಪಿಸಿ ಬಂದಿದ್ದ. ಮರುದಿನ ವಿಷಪೂರಿತ ಹಸುವನ್ನು ತಿಂದು ಹುಲಿಗಳು ಸಾವನ್ನಪ್ಪಿವೆ. ಇದೀಗ ವಿಚಾರಣೆ ವೇಳೆ ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದಾರೆ.