ದೇಶಕ್ಕಾಗಿ ಬಿಜೆಪಿ, ಆರ್ ಎಸ್‌ಎಸ್ ಮನೆಯ ಒಂದು ನಾಯಿಯೂ ಕೂಡ ಪ್ರಾಣ ತ್ಯಾಗ ಮಾಡಿಲ್ಲ- ಮಲ್ಲಿಕಾರ್ಜುನ್ ಖರ್ಗೆ

ಶುಕ್ರವಾರ, 5 ಅಕ್ಟೋಬರ್ 2018 (15:19 IST)
ಬೆಂಗಳೂರು : ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಜನಸಂಘರ್ಷ ಯಾತ್ರೆಯಲ್ಲಿ ಮಾತನಾಡಿದ ಅವರು, ‘ದೇಶದ ಸ್ವಾತಂತ್ರಕ್ಕಾಗಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರ ಮನೆಯ ನಾಯಿಯೂ ಸತ್ತಿಲ್ಲ’ ಎಂದು ಹೇಳಿದ್ದಾರೆ.


ಅಲ್ಲದೇ ಕಾಂಗ್ರೆಸ್ಸಿಗರು ದೇಶಕ್ಕೆ ತ್ಯಾಗ ಮಾಡಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಪ್ರಾಣಾರ್ಪಣೆ ಮಾಡಿದ್ದಾರೆ. ಆದರೆ, ಬಿಜೆಪಿ, ಆರ್ ಎಸ್‌ಎಸ್ ಮನೆಗಳ ಒಂದು ನಾಯಿಯಾದರೂ ಸ್ವಾತಂತ್ರ್ಯಕ್ಕಾಗಿ ಸತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ