ಜೆಡಿಎಸ್ ಬಿಟ್ಟ ಶಾಸಕ ಮಲ್ಲಿಕಾರ್ಜುನ ಖೂಬಾ ಮುಂದಿನ ನಿಲ್ದಾಣ ಎಲ್ಲಿ?!

ಮಂಗಳವಾರ, 3 ಏಪ್ರಿಲ್ 2018 (11:30 IST)
ಬೆಂಗಳೂರು: ಚುನಾವಣೆಗೆ ಕೆಲವೇ ದಿನಗಳಿರುವಾಗ ಪಕ್ಷಾಂತರ ಪರ್ವ ಇನ್ನೂ ಮುಗಿದಿಲ್ಲ. ಇದೀಗ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಂದೆ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.

ಬಸವಕಲ್ಯಾಣ ಶಾಸಕ ಖೂಬಾ ಇಂದು ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಬಿಕೆ ಕೋಳಿವಾಡಗೆ ಸಲ್ಲಿಸಿದರು. ಈ ಮೂಲಕ ಜೆಡಿಎಸ್ ನಿಂದ ಅಧಿಕೃತವಾಗಿ ಹೊರಬಂದಿದ್ದಾರೆ. ಕೆಲವು ದಿನಗಳ ಹಿಂದೆಯೇ ಕೋಳಿವಾಡ ಜೆಡಿಎಸ್ ಗೆ ಗುಡ್ ಬೈ ಹೇಳುವ ಸುದ್ದಿ ಹರಿದಾಡುತ್ತಿತ್ತು. ಇದೀಗ ಅಧಿಕೃತವಾಗಿ ಪಕ್ಷದಿಂದ ಹೊರಬಂದಿದ್ದು, ಬಿಜೆಪಿ ಪಾಳಯ ಸೇರಿಕೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ