ಕೆಲಸದಿಂದ ತೆಗೆದ ಕೋಪಕ್ಕೆ ಎಚ್ ಆರ್ ಕೊಲೆಗೆ ಯತ್ನ

ಶನಿವಾರ, 26 ಮಾರ್ಚ್ 2022 (11:53 IST)
ಬೆಂಗಳೂರು: ನೌಕರಿಯಿಂದ ಕಿತ್ತು ಹಾಕಿದ ಸಿಟ್ಟಿಗೆ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂಸ್ಥೆಯ ಎಚ್ ಆರ್ ಅಧಿಕಾರಿಯನ್ನು ಕೊಲೆ ಮಾಡಲೆತ್ನಿಸಿದ ಘಟನೆ ನಡೆದಿದೆ.
 

ಕಂಪನಿಯ ನಿಯಮ ಉಲ್ಲಂಘನೆ ಮಾಡಿದ್ದಾರೆಂಬ ಕಾರಣಕ್ಕೆ ಮಧು ಎಂಬಾತನನ್ನು ಕೆಲಸದಿಂದ ಕಿತ್ತು ಹಾಕಲಾಗಿತ್ತು. ಇದೇ ಸಿಟ್ಟಿನಲ್ಲಿ ಮಧು ತನ್ನ ಸಹಚರರೊಂದಿಗೆ ಸೇರಿಕೊಂಡು ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ರಾಜಶೇಖರ್ ಅವರನ್ನು ಕೊಲೆ ಮಾಡಲೆತ್ನಿಸಿದ್ದಾನೆ.

ಮೊದಲು ಕಾರು ಅಡ್ಡಗಟ್ಟಿ ಕೊಲೆಗೆ ಯತ್ನಿಸಿದ್ದರು. ಆದರೆ ಅದರಿಂದ ಬಚಾವ್ ಆದ ರಾಜಶೇಖರ್ ರನ್ನು ಕೊಲೆ ಮಾಡಲು ಮನೆ ಬಳಿ ಹೊಂಚು ಹಾಕಿ ಕಾಯುತ್ತಿದ್ದರು. ಆದರೆ ಅದಕ್ಕೆ ಮೊದಲು ರಾಜಶೇಖರ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ