ವಿಮಾನದ ತುರ್ತು ನಿರ್ಗಮನ ದ್ವಾರ ತೆಗೆಯಲು ವ್ಯಕ್ತಿ ಪ್ರಯತ್ನ?

ಶನಿವಾರ, 8 ಏಪ್ರಿಲ್ 2023 (10:55 IST)
ಬೆಂಗಳೂರು : ರಾಷ್ಟ್ರ ರಾಜಧಾನಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕಂಠಪೂರ್ತಿ ಕುಡಿದು ನಶೆಯಲ್ಲಿ ಹುಚ್ಚಾಟ ಮೆರೆದಿದ್ದಾನೆ. ವಿಮಾನ ಹಾರಾಟದ ವೇಳೆಯೇ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.
 
ವರದಿಗಳ ಪ್ರಕಾರ ಘಟನೆ ಶುಕ್ರವಾರ ಬೆಳಗ್ಗೆ 7:56ರ ವೇಳೆಗೆ ವಿಮಾನ ಸಂಖ್ಯೆ 6ಇ 308 ರಲ್ಲಿ ನಡೆದಿದೆ. ಆರೋಪಿಯನ್ನು ಪ್ರತೀಕ್ (40) ಎಂದು ಗುರುತಿಸಲಾಗಿದೆ. ಆತ ಕಂಠಪೂರ್ತಿ ಮದ್ಯಪಾನ ಮಾಡಿ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. 

ಪ್ರಯಾಣಿಕನ ನಡತೆ ಕಂಡು ತಕ್ಷಣವೇ ಎಚ್ಚೆತ್ತ ವಿಮಾನದ ಸಿಬ್ಬಂದಿ ಈ ಬಗ್ಗೆ ಕ್ಯಾಪ್ಟನ್ಗೆ ಮಾಹಿತಿ ನೀಡಿದ್ದಾರೆ. ಆತನನ್ನು ತಡೆದು, ವಿಮಾನ ಬೆಂಗಳೂರಿಗೆ ಬಂದಿಳಿದ ಬಳಿಕ ಸಿಐಎಸ್ಎಫ್ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಯಾಣಿಕನ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ