ಮಂಗಳೂರು ಗುಡ್ಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಸೋಮವಾರ, 6 ಜುಲೈ 2020 (10:15 IST)
ಮಂಗಳೂರು: ನಿನ್ನೆ ಮಂಗಳೂರಿನ ಹೊರವಲಯಲ್ಲಿರುವ ಗುರುಪುರದಲ್ಲಿ ಗುಡ್ಡ ಕುಸಿತದಿಂದಾಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಪರಿಹಾರ ಘೋಷಿಸಿದ್ದಾರೆ.


ಗುಡ್ಡ ಕುಸಿತದಿಂದಾಗಿ ನಾಲ್ಕು ಮನೆಗಳು ನಾಶವಾಗಿದ್ದವು. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಘಟನೆಯಾದ ಸ್ಥಳಕ್ಕೆ ಸ್ಥಳೀಯ ಶಾಸಕರು ತೆರಳಿ ಪರಿಶೀಲನೆ ನಡೆಸಿದ್ದು, ತೆರವು ಕಾರ್ಯಾಚರಣೆಯನ್ನೂ ಮಾಡಲಾಗಿದೆ. ಇದೀಗ ಸಿಎಂ ಯಡಿಯೂರಪ್ಪ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ