ಮಂಗಳೂರು ಗಲಭೆ: ಶಾಂತಿ ಸಭೆ ಬಹಿಷ್ಕರಿಸಿದ ಬಿಜೆಪಿ, ಜೆಡಿಎಸ್

ಗುರುವಾರ, 13 ಜುಲೈ 2017 (17:05 IST)
ಜಿಲ್ಲಾಡಳಿತದ ಶಾಂತಿ ಸಭೆ ಆರಂಭವಾಗಿದ್ದು, ಸಭೆಗೆ ಹಿಂದು ಪರ ಸಂಘಟನೆಗಳ ಮುಖಂಡರು, ಬಿಜೆಪಿ, ಜೆಡಿಎಸ್ ನಾಯಕರು ಬಹಿಷ್ಕಾರ ಹಾಕಿದ್ದಾರೆ.
 
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಸಭೆ ಆಯೋಜಿಸಲಾಗಿದ್ದು, ಜೆಡಿಎಸ್ ನಾಯಕರು ಸಭೆಗೆ ಬಂದರಾದರೂ ನಂತರ ಬಂದ ದಾರಿಗೆ ಸುಂಕವಿಲ್ಲವೆನ್ನುವಂತೆ ಮರಳಿದ್ದಾರೆ. ಕಾಂಗ್ರೆಸ್, ಪಿಎಫ್‌ಐ, ಎಸ್‌ಡಿಪಿಐ ಸೇರಿದಂತೆ ಇತರ ಸಂಘಟನೆಗಳು ಸಭೆಯಲ್ಲಿ ಪಾಲ್ಗೊಂಡಿವೆ ಎಂದು ಮೂಲಗಳು ತಿಳಿಸಿವೆ.
 
ಸಚಿವರಾದ ರಮಾನಾಥ್ ರೈ ಯು.ಟಿ.ಖಾದರ್ ಸಭೆಯಲ್ಲಿ ಉಪಸ್ಥಿತರಿದ್ದು, ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
 
ಐಜಿಪಿ ಹರಿಶೇಖರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಸಭೆಗೆ ಹಾಜರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ