Mangaluru: ಮುಸ್ಲಿಮರ ಆಕ್ರೋಶಕ್ಕೆ ಬೆದರಿ ಹಿಂದೂ ಮುಖಂಡರ ವಿರುದ್ಧ ಸರ್ಕಾರದಿಂದ ಕೇಸ್, ನೋಟಿಸ್

Krishnaveni K

ಸೋಮವಾರ, 2 ಜೂನ್ 2025 (12:35 IST)
ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ತಂದ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ಮುಸ್ಲಿಮರ ಆಕ್ರೋಶಕ್ಕೆ ಬೆದರಿದ ರಾಜ್ಯ ಸರ್ಕಾರ ಹಿಂದೂ ಮುಖಂಡರ ಮೇಲೆ ಕೇಸ್, ಗಡೀಪಾರಿನ ನೋಟಿಸ್ ನೀಡುತ್ತಿದೆ.

ಮೊನ್ನೆಯಷ್ಟೇ ಬಂಟ್ವಾಳದಲ್ಲಿ ಮುಸ್ಲಿಂ ಯುವಕ ಅಬ್ದುಲ್ ರಹಿಮಾನ್ ಕೊಲೆ ನಡೆದಿತ್ತು. ಈ ಹಿಂದೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಈ ಹತ್ಯೆ ನಡೆಸಲಾಗಿದೆ ಎನ್ನಲಾಗಿದೆ. ಈ ಕೊಲೆ ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ವಿರುದ್ಧ ತಿರುಗಿಬೀಳುವಂತೆ ಮಾಡಿದೆ.

ಬಂಟ್ವಾಳದ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಈಗ ರಾಜ್ಯ ಸರ್ಕಾರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಮುಖಂಡರ ಮೇಲೆ ಕೇಸ್ ಜಡಿಯುತ್ತಿದೆ.

ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡೀಪಾರಿಗೆ ಆದೇಶಿಸಿ ನೋಟಿಸ್ ನೀಡಲಾಗಿದೆ. ಇದೀಗ ಅವರು ವಕೀಲರೊಂದಿಗೆ ಜೂನ್ 6 ರಂದು ವಿಚಾರಣೆಗೆ ಹಾಜರಾಗಬೇಕಿದೆ.

ಕೋಮು ಪ್ರಚೋದನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸರ್ಕಾರ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಹಿಂದೂ ಸಮುದಾಯದ ಪ್ರಮುಖ ಮುಖಂಡರಿಗೆ ನೋಟಿಸ್, ಕೇಸ್ ದಾಖಲಿಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ