ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನಾ ದೇವೇಗೌಡ ದಂಪತಿ ಆಶೀರ್ವಾದ ಪಡೆದ ಮಂಜುನಾಥ್

sampriya

ಗುರುವಾರ, 6 ಜೂನ್ 2024 (18:21 IST)
Photo By X
ಬೆಂಗಳೂರು: ನಾಳೆ (ಶುಕ್ರವಾರ) ಎನ್‌ಡಿಎ ಮೈತ್ರಿಕೂಟ ಪಕ್ಷಗಳ ಸಂಸದರು ಸಭೆ ಸೇರಲಿರುವ ಕಾರಣ ಬೆಂಗಳೂರು ಗ್ರಾಮಾಂತರದರಿಂದ ಗೆಲುವು ಸಾಧಿಸಿ ಸಂಸತ್‌ಗೆ ಪ್ರವೇಶಿಸುತ್ತಿರುವ ಡಾ. ಸಿಎನ್‌ ಮಂಜುನಾಥ್‌ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದರು.

ಬಿಜೆಪಿ ಸ್ವತಂತ್ರರಾಗಿ ಅಧಿಕಾರದ ಗದ್ದುಗೆ ಎರಲು ವಿಫಲವಾಗಿರುವ ಕಾರಣ ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಸಹಾಯದಿಂದ ಬಿಜೆಪಿ ಸರ್ಕಾರ ರಚಿಸಲು ಮುಂದಾಗಿದೆ. ಆದರೆ ಇದೀಗ ಬಿಜೆಪಿ ನಾಯಕರು ಸಚಿವ ಸಂಪುಟ ರಚನೆ, ಖಾತೆಗಳ ಹಂಚಿಕೆ ಸೇರಿದಂತೆ ಪಕ್ಷ ತೆಗೆದುಕೊಳ್ಳಬೇಕಾದ ನಿಲುವುಗಳ ಬಗ್ಗೆ ನಾಳೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ.

ಈ ಹಿನ್ನೆಲೆ ದೆಹಲಿ ತೆರಳುವುದಕ್ಕೂ ಮುನ್ನ ಮಾಜಿ ಪ್ರಧಾನಿ, ನಾಡಿನ ಹಿರಿಯ ನಾಯಕ ಎಚ್‌ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರ ಆಶೀರ್ವಾದ ಪಡೆದರು.

ಇನ್ನೂ ತಮ್ಮ ಎಕ್ಸ್‌ ಖಾತೆಯಲ್ಲೂ ನಮಸ್ಕರಿಸುತ್ತಿರುವ ಫೋಟೋವನ್ನು ಶೇರ್‌ ಮಾಡಿ ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ