ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ವಿಷಯದಲ್ಲೂ ರಾಜಕೀಯ ಮಾಡಬೇಡಿ. ಮರಿಗೌಡ ಪಕ್ಷದ ಒಬ್ಬ ಸದಸ್ಯ ಹೊರತು ನನ್ನ ಆಪ್ತನಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನಾನು ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ರಾಜ್ಯ ಸರಕಾರ ನಿಷ್ಠಾವಂತ ಅಧಿಕಾರಿಗಳಿಗೆ ರಕ್ಷಣೆ ನೀಡುವಲ್ಲಿ ಬದ್ಧವಾಗಿದೆ ಎಂದು ತಿಳಿಸಿದರು.