ಜಿಲ್ಲಾಧಿಕಾರಿಗೆ ಧಮ್ಕಿ: ಮರಿಗೌಡನಿಗೆ ಆಗಸ್ಟ್ 16ರ ವರೆಗೆ ನ್ಯಾಯಾಂಗ ಬಂಧನ
ಬುಧವಾರ, 3 ಆಗಸ್ಟ್ 2016 (18:49 IST)
ಮೈಸೂರು ಜಿಲ್ಲಾಧಿಕಾರಿ ಶಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡನನ್ನು 3ನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಆಗಸ್ಟ್ 16 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಹಶೀಲ್ದಾರ್ ವರ್ಗಾವಣೆಗೆ ಸಂಬಂಧಿಸಿದಂತೆ ಸಿಎಂ ಆಪ್ತ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಮರಿಗೌಡ ಜಿಲ್ಲಾಧಿಕಾರಿಗಳಿಗೆ ಧಮ್ಕಿ ಹಾಕಿದ್ದ. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದರು.
ಘಟನೆ ನಡೆದ ಒಂದು ತಿಂಗಳಿನಿಂದ ಸಿಎಂ ಆಪ್ತ ಮರಿಗೌಡ ತಲೆ ಮರೆಸಿಕೊಂಡಿದ್ದ. ಹಾಗೂ ಪ್ರಕರಣ ಕುರಿತು ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದ. ಆದರೆ, ನ್ಯಾಯಾಧೀಶರು ಜಾಮೀನು ಅರ್ಜಿವನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಇಂದು ನಜರ್ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.
ಪೊಲೀಸ್ ಠಾಣೆಗೆ ಶರಣಾದರೇ ಶೀಘ್ರದಲ್ಲೇ ಜಾಮೀನು ದೊರೆಯುತ್ತದೆ ಎಂದು ವಕೀಲರು ನೀಡಿದ ಸಲಹೆ ಮೇರೆಗೆ ಇಂದು ಸಿಎಂ ಆಪ್ತ ಮರಿಗೌಡ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.