ಚೆಕ್ ವಿತರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು ಕೊಪ್ಪದ ಅವರ ಹೆಸರನ್ನು ಹುಬ್ಬಳ್ಳಿ ನಗರದ ಪ್ರಮುಖ ರಸ್ತೆಯೊಂದಕ್ಕೆ ಇಡಲಾಗುವುದು. ಈ ಕುರಿತು ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚನೆ ನೀಡಿದ್ದೇನೆ. ಯೋಧನ ಪತ್ನಿ ಮಹಾದೇವಿ ಅವರಿಗೆ ಸರ್ಕಾರಿ ನೌಕರಿ, 4 ಎಕರೆ ಜಮೀನು, 1 ನಿವೇಶನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಿಯಾಚಿನ್ ಹಿಮಪಾತದಲ್ಲಿ ಕರ್ನಾಟಕದ ಮೂವರು ಸೇರಿದಂತೆ 10 ಜನ ಸಿಕ್ಕಿ ಹಾಕಿಕೊಂಡಿದ್ದರು. ಅದರಲ್ಲಿ 9 ಜನ ಅಲ್ಲೇ ಮೃತಪಟ್ಟಿದ್ದರೆ, ಹನುಮಂತಪ್ಪ ಕೊಪ್ಪದ್ ಪವಾಡಸದೃಶವಾಗಿ ಬದುಕಿಳಿದು ಬಳಿಕ ಆಸ್ಪತ್ರೆಯಲ್ಲಿ ಹುತಾತ್ಮರಾಗಿದ್ದರು. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಯೋಧ ಪಿ.ಎನ್. ಮಹೇಶ್ ಹಾಗೂ ಹಾಸನದ ತೇಜೂರು ಗ್ರಾಮದ ಟಿ.ಟಿ.ನಾಗೇಶ್ ಅವರ ಮೃತದೇಹಗಳು ಇನ್ನೂ ಕುಟುಂಬದವರಿಗೆ ಲಭ್ಯವಾಗಿಲ್ಲ.