ಮಸೀದಿ ವಿವಾದ ಹೈಕೋರ್ಟ್ ಅಂಗಳಕ್ಕೆ
ಇನ್ನೆರಡು ದಿನಗಳಲ್ಲಿ ಹೈಕೊರ್ಟ್ನಲ್ಲಿ 108 ಹನುಮ ಭಕ್ತರು ದಾವೆ ಹೂಡಲಿದ್ದಾರೆ. 5 ತಿಂಗಳ ಹಿಂದೆ ಶ್ರೀರಂಗಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಜಾಮಿಯಾ ಮಸೀದಿಯಲ್ಲ ಹನುಮ ಮಂದಿರ ಎಂದು ಹೋರಾಟ ನಡೆಸಿತ್ತು.
ಮಸೀದಿ ಜಾಗ ಹಿಂದೂಗಳಿಗೆ ಮರಳಿ ನೀಡುವಂತೆ ಸರ್ಕಾರಕ್ಕೆ ಗಡುವು ನೀಡಿದ್ದವು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಇದೀಗ ಕೋರ್ಟ್ ಮೊರೆ ಹೋಗಲಾಗಿದೆ.
ಅಯೋಧ್ಯೆ ಶ್ರೀರಾಮ ಮಂದಿರ ರೀತಿ ಹನುಮ ಮಂದಿರಕ್ಕಾಗಿ ನ್ಯಾಯಾಂಗ ಹೋರಾಟ ನಡೆಸಲು ಕೊನೆಯ ಹಂತದ ತಯಾರಿಗಳು ಸಹ ಇದೀಗ ಮುಕ್ತಾಯಗೊಂಡಿವೆ. 108 ಹನುಮ ಭಕ್ತರಿಂದ ಹೈಕೋರ್ಟ್ಗೆ ದಾವೆ ಹೂಡಿಕೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.