ಮುಸ್ಲಿಂ ಮುಖಂಡರ ಪ್ರಚೋದನಕಾರೀ ಹೇಳಿಕೆ: ಬಿಸಿ ರೋಡ್ ನಲ್ಲಿ ಹಿಂದೂಗಳ ಪ್ರತಿಭಟನೆ

Krishnaveni K

ಸೋಮವಾರ, 16 ಸೆಪ್ಟಂಬರ್ 2024 (10:31 IST)
ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆ ಬೆನ್ನಲ್ಲೇ ಕೆಲವು ಮುಸ್ಲಿಂ ಮುಖಂಡರ ಪ್ರಚೋದನಕಾರೀ ಹೇಳಿಕೆ ಹಿನ್ನಲೆಯಲ್ಲಿ ಬಿಸಿ ರೋಡ್ ನಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಪ್ರಕ್ಷುಬ್ಧ ವಾತಾವರಣವಿದೆ.

ಇಂದು ಈದ್ ಮೆರವಣಿಗೆಯೂ ಇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಮೊನ್ನೆಯಷ್ಟೇ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಕೆಲವು ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದರಿಂದ ಭಾರೀ ಗಲಾಟೆಯಾಗಿತ್ತು.

ಬಿಸಿ ರೋಡ್ ಮೊದಲೇ ಸೂಕ್ಷ್ಮ ಪ್ರದೇಶ. ಇದೀಗ ಈದ್ ಮೆರವಣಿಗೆಗೆ ಮೊದಲು ಮುಸ್ಲಿಂ ಮುಖಂಡರ ಪ್ರಚೋದನಕಾರೀ ಹೇಳಿಕೆ ಹಿಂದೂ ಕಾರ್ಯಕರ್ತರನ್ನು ಕೆರಳಿಸಿದೆ. ಈಗಾಗಲೇ ವಿಎಚ್ ಪಿ ನಾಯಕ ಶರಣ್ ಪಂಪ್ ವೆಲ್ ನಾವೂ ಈದ್ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದರೆ ಹೇಗಿರುತ್ತದೆ ಎಂದಿದ್ದರು.

ಈ ಹಿನ್ನಲೆಯಲ್ಲಿ ಇಂದು ಮತ್ತೊಮ್ಮೆ ಕೋಮುಗಲಭೆಯಾಗದಂತೆ ಪೊಲೀಸರು ಭಾರೀ ಭದ್ರತೆ ಏರ್ಪಡಿಸಿದ್ದಾರೆ. ಹಾಗಿದ್ದರೂ ಮುಸ್ಲಿಂ ಮುಖಂಡರ ಹೇಳಿಕೆ ಖಂಡಿಸಿ ಇಂದು ಹಿಂದೂ ಸಂಘಟನೆಗಳು ಬಿಸಿ ರೋಡ್ ಚಲೋ ಹೋರಾಟಕ್ಕೆ ಕರೆನೀಡಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಪ್ರಯತ್ನ ನಡೆಸಿದ್ದಾರೆ. ಇದೀಗ ಬಿಸಿ ರೋಡ್ ಬೂದಿ ಮುಚ್ಚಿದ ಕೆಂಡದಂತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ