ದೇವರು ಭಕ್ತರಿಗೆ ದುಃಖ ಭರಿಸುವ ಶಕ್ತಿ ನೀಡಲಿ-ಮಾಜಿ ಸಿಎಂ ಸಿದ್ದರಾಮಯ್ಯ

ಮಂಗಳವಾರ, 3 ಜನವರಿ 2023 (16:59 IST)
ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ 
ಸಿದ್ದೇಶ್ವರ ಶ್ರೀಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಬೆಂಗಳೂರನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿದ್ದೇಶ್ವರ ಶ್ರೀಗಳು ಸಂತರು. ಸರಳ, ಸಜ್ಜನ ಮಹಾ ಸಂತರು. ನುಡಿದಂತೆ ನಡೆದವರು. ಬಸವಣ್ಣರ ತತ್ವ, ಆದರ್ಶಗಳನ್ನು ಬೆಳೆಸಿಕೊಂಡವರು. 
ಸಮಾಜದಲ್ಲಿ ಪ್ರೀತಿ ವಿಶ್ವಾಸದಿಂದ ಇದ್ದವರು. ಲಕ್ಷಾಂತರ ಭಕ್ತಾಧಿಗಳಿಗೂ, ಅವರ ಅನುಯಾಯಿಗಳಿಗೂ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ