ವಿಶ್ವ ಆರೋಗ್ಯ ಸಂಸ್ಥೆ ಭಾರತದ ಐದು ರಾಜ್ಯಗಳನ್ನು ಆಯ್ಕೆ ಮಾಡಿದ್ದು ನಮ್ಮ ಕರ್ನಾಟಕವು ಅದರಲ್ಲಿ ಸೇರಿದೆ, ರಾಜ್ಯ ಸರ್ಕಾರ, ವಿಶ್ವ ಆರೋಗ್ಯ ಸಂಸ್ಥೆ, ರಾಷ್ಟ್ರೀಯ ಆರೋಗ್ಯ ಮಿಷನ್ ಹಾಗೂ ಲಯನ್ಸ್ ಸಂಸ್ಥೆ ಸಹಯೋಗದಲ್ಲಿ ಈ ಅಭಿಯಾನ ನಡೆಯಲಿದೆ ಎಂದು ಶಿಕ್ಷಣ ಸಚಿವ ತನ್ವೀರ್ ಸೇಟ್ ಅವರು ಹೇಳಿದರು. ಒಮ್ಮೆ ಲಸಿಕೆ ಹಾಕಿಸಿಕೊಂಡ ಮಕ್ಕಳಿಗೂ ಮತ್ತೊಮ್ಮೆ ಲಸಿಕೆ ಹಾಕಿಸಬಹುದು ಲಸಿಕೆ ಹಾಕಿಸಿಕೊಂಡ ಮೇಲೆ ಮಕ್ಕಳಲ್ಲಿ ಸ್ವಲ್ಪ ಜ್ವರ ಹಾಗೂ ವಾಂತಿ ಕಾಣಿಸಿಕೊಳ್ಳಬಹುದು. ಆದರೆ ಅದಕ್ಕೆ ಹೆದರುವ ಅಗತ್ಯ ಇಲ್ಲ ಎಂದು ಸಚಿವರು ತಿಳಿಸಿದರು.
ಪೊಲಿಯೋ ನಿರ್ಮೂಲನೆ: ಪ್ರತಿ ಶಾಲೆಗಳಲ್ಲಿ, ಅಂಗನವಾಗಿ ಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಲಸಿಕಾ ಕೇಂದ್ರಗಳನ್ನು ಪ್ರಾರಂಭಿಸಿ ಲಸಿಕೆ ಹಾಕಲಾಗುವುದು ಎಂದ ಸಚಿವರು ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ದೇಶದಲ್ಲಿ ಪೊಲಿಯೋ ನಿರ್ಮೂಲನೆ ಮಾಡಿದಂತೆ ಈ ಕಾಯಿಲೆಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಸಚಿವ ತನ್ವೀರ್ ಸೇಠ್ ಅವರು ಮನವಿ ಮಾಡಿದರು.