ಮೀಡಿಯಾದ್ದೇ ಗೊಂದಲ : ನಮ್ದಲ್ಲ ಎಂದವರಾರು?

ಸೋಮವಾರ, 18 ಮಾರ್ಚ್ 2019 (15:24 IST)
ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡ ನಂತರ ಸೀಟು ಹಂಚಿಕೆ ವಿಚಾರಗಳಲ್ಲಿ ಹುಟ್ಟಿಕೊಂಡಿರುವ ಗೊಂದಲಗಳೆಲ್ಲಾ ಮೀಡಿಯಾಗಳಲ್ಲೇ ಇವೆ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಹೀಗಂತ ಮಾಜಿ ಪ್ರಧಾನಿ ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪರ ಗೆಲುವಿಗೆ ಕಾಗೋಡು ತಿಮ್ಮಪ್ಪನವರೊಂದಿಗೆ ಚರ್ಚಿಸಿ ಶಕ್ತಿ ಮೀರಿ ಶ್ರಮಿಸಲಾಗುತ್ತದೆ ಎಂದು ಜೆಡಿಎಸ್ ಮುಖಂಡ ದೇವೇಗೌಡ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರ ಮೊಮ್ಮಕ್ಕಳ ಗೆಲುವಿಗೆ ಹೇಗೆ ಶಕ್ತಿ ಮೀರಿ ಶ್ರಮಿಸಲಾಗುತ್ತಿದೆ ಎಂದು ಪ್ರಚಾರವಾಗುತ್ತಿದೆಯೋ ಹಾಗೆ ಮಧುಬಂಗಾರಪ್ಪನವರೂ ಸಹ ನನ್ನ ಮೊಮ್ಮಗ ಇದ್ದ ಹಾಗೆಯೇ. ಅವರ ಗೆಲುವಿಗೂ ಶಕ್ತಿ ಮೀರಿ ಶ್ರಮವಹಿಸಲಾಗುತ್ತದೆ ಎಂದಿದ್ದಾರೆ. 

ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪನವರ ಗೆಲುವಿಗೆ ಡಿ.ಕೆ.ಶಿವಕುಮಾರ್ ಜೊತೆಗೆ ಎಲ್ಲರೂ ಕ್ಷೇತ್ರಕ್ಕೆ ಬಂದು ಶಕ್ತಿ ಮೀರಿ ಶ್ರಮಿಸಲಿದ್ದಾರೆ ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ