ಜಗಳವಾಡುತ್ತಿದ್ದ ಸಂಗಾತಿಗೆ ವ್ಯಕ್ತಿಯೊಬ್ಬ ಮಾಡಿದ್ದೇನು?

ಶುಕ್ರವಾರ, 5 ಮಾರ್ಚ್ 2021 (09:00 IST)
ಗುರುಗ್ರಾಮ : ಗುರುಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಸಂಗಾತಿಯ ಮಕ್ಕಳನ್ನು ಕಾಲುವೆಗೆ ಎಸೆದು ಕೊಲೆ ಮಾಡಿದನೆಂದು ಆರೋಪಿಸಲಾಗಿದೆ.

ಮಹಿಳೆಯ ಪತಿ ನಿಧನರಾದ ಹಿನ್ನಲೆಯಲ್ಲಿ  ಆಕೆ ಆರೋಪಿಯ ಜೊತೆ ಸಂಬಂಧ ಹೊಂದಿದ್ದಳು. ಇದರಿಂದ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ನಡುವೆ ಮಹಿಳೆ ಮತ್ತು ಆರೋಪಿಯ ನಡುವೆ ಜಗಳವಾಗುತ್ತಿದ್ದ ಕಾರಣ ಆರೋಪಿ ತನ್ನ ಸ್ನೇಹಿತರ ಸಹಾಯದಿಂದ ಆಕೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದಿದ್ದಾನೆ. ಮಹಿಳೆ ಬಚಾವ್ ಆಗಿದ್ದು ಮಕ್ಕಳು ಸಾವನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ