ಗಣಿ ಕೇಸ್: ಕುಮಾರಸ್ವಾಮಿ ದಂಪತಿ ಖುದ್ದು ಹಾಜರಾತಿಗೆ ಕೋರ್ಟ್ ಆದೇಶ

ಮಂಗಳವಾರ, 21 ಫೆಬ್ರವರಿ 2017 (21:01 IST)
ಗಣಿ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಅವರ ಪತ್ನಿ ಅನಿತಾ ಕುಮಾರಸ್ವಾಮಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಲೋಕಾಯುಕ್ತ ಕೋರ್ಟ್ ಆದೇಶ ನೀಡಿದೆ.  
 
ಜಂತಕಲ್ ಗಣಿ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋದ್ ಎನ್ನುವವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಮಾರ್ಚ್ 15 ರಂದು ಕುಮಾರಸ್ವಾಮಿ ದಂಪತಿಗಳು ಖುದ್ದಾಗಿ ಹಾಜರಿರಬೇಕು ಎಂದು ಆದೇಶಿಸಿ ವಿಚಾರಣೆ ಮುಂದೂಡಿದೆ. 
 
ಮಾರ್ಚ್ 15 ರಂದು ವಿಚಾರಣೆ ನಡೆಯುವ ವೇಳೆ ಕೇಸ್‌ಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕೋರ್ಟ್‌ಗೆ ಒಪ್ಪಿಸಬೇಕು ಎಂದು ದೂರುದಾರ ವಿನೋದ್‌ ಅವರಿಗೆ ಕೋರ್ಟ್ ಆದೇಶ ನೀಡಿದೆ.
 
ಈ ಹಿಂದೆ ಜಂತಕಲ್ ಮೈನಿಂಗ್ ಗುತ್ತಿಗೆ ಪ್ರಕರಣನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿನೋದ್ ಎನ್ನುವವರು ಸುಪ್ರೀಂಕೋರ್ಟ್ ಮೊರೆಹೋಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ