ಸಚಿವ ಅನಂತ್‌ಕುಮಾರ್ ಹೆಗಡೆ ನಾಲಿಗೆ ಕತ್ತರಿಸಿದ್ರೆ 1 ಕೋಟಿ ರೂ. ಬಹುಮಾನ: ಪಟ್ಟೇದಾರ್

ಮಂಗಳವಾರ, 26 ಡಿಸೆಂಬರ್ 2017 (13:57 IST)
ಸಂವಿಧಾವ ವಿರೋಧಿ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಪೇಜಾವರ ಶ್ರೀಗಳ ಕತ್ತು ಕತ್ತರಿಸಿದವರಿಗೆ 1 ಕೋಟಿ ರೂ ಬಹುಮಾನ ನೀಡುವುದಾಗಿ ಮಾಜಿ ಜಿಪಂ ಸದಸ್ಯ ಗುರುಶಾಂತ್ ಪಟ್ಟೇದಾರ್ ಘೋಷಿಸಿದ್ದಾರೆ. 
ಸಂವಿಧಾನ ಬದಲಾವಣೆ ಮಾಡುವುದಕ್ಕೆ ನಾವು ಬಂದಿದ್ದೇವೆ ಎನ್ನುವ ಕೇಂದ್ರ ಸಚಿವರ  ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ನಾಲಗೆ ಕತ್ತರಿಸಿ ತಂದವರಿಗೆ ಒಂದು ಕೋಟಿ ರೂ. ಬಹುಮಾನ ಕೊಡುತ್ತೇವೆ ಎಂದು ಗುಡುಗಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಸಂಪುಟದ ಸಚಿವನಾಗಿರುವ ಹೆಗಡೆಯನ್ನು ಹದ್ದುಬಸ್ತಿನಲ್ಲಿಡಬೇಕು. ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವ ಹೆಗಡೆಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
 
ಉಡುಪಿಯ ಪೇಜಾವರಶ್ರೀಗಳು ಸಂವಿಧಾನ ಬದಲಾವಣೆಯಾಗಬೇಕು ಎಂದು ಹೇಳುತ್ತಿದ್ದಾರೆ.ಸಂವಿಧಾನ ಹಾಗೂ ದೇಶದ್ರೋಹ ಹೇಳಿಕೆ ಯಾರೇ ನೀಡಲಿ ಅಂಥವರ ಮೊದಲು ನಾಲಿಗೆ, ಆನಂತರ ಕೈ ಕಾಲು, ಕುತ್ತಿಗೆ ಕಡಿಯುತ್ತೇವೆ ಎಂದು ಎಚ್ಚರಿಸಿದರು. 
 
ಪೇಜಾವರ ಶ್ರೀ ಹಾಗೂ ಅನಂತಕುಮಾರ ಹೆಗಡೆ ಹೇಳಿಕೆಯಿಂದ ದೇಶದ, ರಾಜ್ಯದ ದಲಿತ, ಅಲ್ಪಸಂಖ್ಯಾತ ಜನರಿಗೆ ನೋವಾಗಿದೆ. ಒಂದು ತಿಂಗಳಲ್ಲಿ ಅನಂತಕುಮಾರ ಹೆಗಡೆ ನಾಲಿಗೆ ಕಟ್ ಮಾಡಿದವರಿಗೆ ಒಂದು ಕೋಟಿ ರೂ. ಬಹುಮಾನ ಕೊಡುವುದಾಗಿ ಮಾಜಿ ಜಿಪಂ ಸದಸ್ಯ ಗುರುಶಾಂತ್ ಪಟ್ಟೇದಾರ್ ಘೋಷಿಸಿದ್ದಾರೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ