ಅಲಮೇಲದ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿನ ಎಲ್ಲ ಮಕ್ಕಳು ಖಾಲಿ ಮಾಡಿಕೊಂಡು ಮನೆಗೆ ತೆರಳಿದ್ದಾರೆ. ಆದರೆ ವಸತಿ ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆಂಜನೇಯ ಅಲ್ಲಿಗೆ ಭೇಟಿ ನೀಡಲಿದ್ದಾರೆ. ವಸತಿ ಶಾಲೆಯಲ್ಲಿ ಭೀಭತ್ಸ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆದ ಸುದ್ದಿ ಬೆಳಕಿಗೆ ಬಂದ ಮೇಲೆ ಭಯಭೀತರಾದ ಪೋಷಕರು ತಮ್ಮ ಮಕ್ಕಳನ್ನು ವಸತಿ ಶಾಲೆಯಿಂದ ಖಾಲಿ ಮಾಡಿಸಿ ಮನೆಗೆ ಕರೆದುಕೊಂಡು ಹೋಗಿದ್ದಾರೆ.