ಈ ಮೂವರು ಅಕ್ರಮ ಕಲ್ಲು ಗಣಿಗಾರಿಕೆ ಮಾಡುತ್ತಿದ್ದು, ಈ ಕುರಿತು ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದೇನೆ. ಏರಂದಪ್ಪನಹಳ್ಳಿಯಲ್ಲಿನ ಗಣಿಗಾರಿಕೆ ಪ್ರಕರಣವನ್ನು ಬೆಳಕಿಗೆ ತಂದಿದ್ದಕ್ಕೆ ಈ ಮೂವರು ನನ್ನನ್ನು ಕೊಲೆ ಮಾಡಲು ಹೊರಟಿದ್ದಾರೆ.
ಈ ಕುರಿತು ರಾಜ್ಯಪಾಲರಿಗೂ ಕೂಡ ಮನವಿ ಪತ್ರ ನೀಡಿದ್ದೇನೆ. ರಾಜ್ಯಸಬಾ ಸದಸ್ಯ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮೂಲಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದೇನೆ ಎಂದಿರುವ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.