ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಚಿವ ಡಿಕೆಶಿ ಕ್ಷಮೆ ಯಾಚಿಸಿದ್ದು ಯಾಕೆ?

ಗುರುವಾರ, 18 ಅಕ್ಟೋಬರ್ 2018 (09:14 IST)
ಗದಗ: ಇಲ್ಲಿನ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ.

ರಂಭಾಪುರಿ ಶ್ರೀಗಳ ಧರ್ಮಸಮ್ಮೇಳನಲ್ಲಿ ಪಾಲ್ಗೊಂಡ ಸಚಿವ ಡಿಕೆ ಶಿವಕುಮಾರ್ ಧರ್ಮದ ವಿಚಾರದಲ್ಲಿ ನಮ್ಮ ಹಿಂದಿನ ಸರ್ಕಾರ ಕೈ ಹಾಕಿ ತಪ್ಪು ಮಾಡಿತು ಎಂದು ಕ್ಷಮೆ ಯಾಚಿಸಿದ್ದಾರೆ.

ರಾಜಕೀಯದವರು ಎಂದಿಗೂ ಧರ್ಮದ ವಿಚಾರಕ್ಕೆ ತಲೆಹಾಕಬಾರದು. ಆದರೆ ನಮ್ಮ ಹಿಂದಿನ ಸರ್ಕಾರ ಆ ತಪ್ಪು ಮಾಡಿತು. ಆ ಸರ್ಕಾರದಲ್ಲಿ ನಾನೂ ಸಚಿವನಾಗಿದ್ದೆ. ಧರ್ಮದ ವಿಚಾರದಲ್ಲಿ ಕೈ ಹಾಕಿದ್ದಕ್ಕೆ ಇಲ್ಲಿ ಸಿಕ್ಕಿದ ಜನಾಭಿಪ್ರಾಯವೇ ಸಾಕ್ಷಿಯಾಯಿತು ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಂದು ಪ್ರತ್ಯೇಕ ಧರ್ಮ ವಿಚಾರವನ್ನು ಎಳೆದು ತಂದಿದ್ದಕ್ಕೆ ಪಶ್ಚಾತ್ತಾಪದ ಮಾತನಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ