ಡಿಕೆಶಿಗೆ ತಪ್ಪದ ಐಟಿ ಬಿಸಿ

ಶುಕ್ರವಾರ, 17 ಆಗಸ್ಟ್ 2018 (20:48 IST)
ಸಚಿವ ಡಿ.ಕೆ.ಶಿವಕುಮಾರಗೆ ಹೊಸ ಸಂಕಷ್ಟ ಎದುರಾಗುವ ಲಕ್ಷಣಗಳು ಗೋಚರಿಸತೊಡಗಿವೆ.

ನವದೆಹಲಿಯಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ವೇಳೆಯಲ್ಲಿ ಅಕ್ರಮ ಹಣ ಪತ್ತೆಯಾಗಿತ್ತು. ಆ ಪ್ರಕರಣ ಕುರಿತು ಈಗ ಸಚಿವರಿಗೆ ಸಂಕಷ್ಟ ಎದುರಾಗುವಂತಿದೆ. ಐಟಿ ಅಧಿಕಾರಿಗಳು ನವದೆಹಲಿಯಲ್ಲಿನ ಫ್ಲಾಟ್ ಗಳ ಮೇಲೆ ದಾಳಿ ನಡೆಸಿದ್ದರು.

ಆಗ ಸಚಿವ ಡಿ.ಕೆ.ಶಿವಕುಮಾರ ಸೇರಿದಂತೆ ಇತರ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ದಾಳಿ ವೇಳೆ 8.59 ಕೋಟಿ ರೂ. ಅಕ್ರಮ ಹಣ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ ಇನ್ಯಾವ ನಡೆ ಇಡಲಿದ್ದಾರೆ ಎಂಬ ಕುತೂಹಲ ಮೂಡಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ