ಕೊರೊನಾ ಚಿಕಿತ್ಸೆಗೆ ನೋ ಎಂದರೆ ಕಾನೂನು ಕ್ರಮ ಖಚಿತ ಎಂದ ಸಚಿವ
ಕೊರೊನಾ ವೈರಸ್ ಹಿನ್ನಲೆ ಆರೋಗ್ಯ ಸಚಿವ ಶ್ರೀರಾಮಲು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊರೊನಾ ವೈರಸ್ ತಡೆಗಟ್ಟಲು ಸಿಎಂ ಬಿ.ಎಸ್. ಯಡಿಯೂರಪ್ಪನವರು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದ್ದಾರೆ. ಜಿಲ್ಲೆಗೆ ವಿದೇಶದಿಂದ 16 ಜನ ಬಂದಿದ್ದಾರೆ. ಅವರನ್ನು ಹೊಮ್ ಐಸೋಲೇಷನ್ ನಲ್ಲಿ ಇಟ್ಟು ನಿಗಾ ವಹಿಸಲಾಗುತ್ತಿದೆ. ವಿದೇಶದಿಂದ ಬಂದವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಯಾರಾದರೂ ತಪಾಸಣೆ ಮಾಡಿಸಿಕೊಳ್ಳಲು ಹಿಂದೇಟು ಹಾಕಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶ್ರೀರಾಮುಲು ಹೇಳಿದರು.